ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(National Human Rights Commission) ನೂತನ ಅಧ್ಯಕ್ಷರಾಗಿ(NHRC Panel chief) ಸುಪ್ರೀಂಕೋರ್ಟ್ ನ(Supreme Court) ಮಾಜಿ ನ್ಯಾಯಮೂರ್ತಿ(Justice (Retd) ) ವಿ. ರಾಮಸುಬ್ರಮಣಿಯನ್(V Ramasubramanian) ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ(ಡಿ.23) ನೇಮಿಸಿದ್ದಾರೆ. ಈ ಮಧ್ಯೆ NHRC ನೂತನ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಆಯ್ಕೆ ಸಮಿತಿಯು ಅಳವಡಿಸಿಕೊಂಡ ಆಯ್ಕೆ ಪ್ರಕ್ರಿಯೆಯು ಸರಿಯಿಲ್ಲ(Flawed Selection Process) ಎಂದು ಹೇಳಿದೆ.
J RF Nariman & J KM Joseph were recommended for the post of Chair NHRC by the LoPs @RahulGandhi @kharge
— Rishav Ranjan (@rishav_ranjan18) December 24, 2024
For members : J Muralidhar & AK Qureshi. All were rejected without deliberation.
J Sarangi is a clear BJP person appointed as member. NHRC was already toothless! pic.twitter.com/8YP9a86Ef8
ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ(Narendra Modi) ನೇತೃತ್ವದ ಉನ್ನತ ಮಟ್ಟದ ಸಮಿತಿ ಡಿಸೆಂಬರ್ 18 ರಂದು ಸಭೆ ಸೇರಿ ಚರ್ಚಿಸಿತ್ತು. ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
ಇದೀಗ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕುರಿತು ತಕರಾರು ತೆಗೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಇದಕ್ಕೆ ಅನೇಕ ಕಾರಣಗಳನ್ನು ನೀಡಿದೆ. ಪೂರ್ವ ನಿರ್ಧರಿತದಂತೆ ಆಯ್ಕೆ ಮಾಡಲಾಗಿದ್ದು, ಪರಸ್ಪರ ಸಮಾಲೋಚನೆ ಮತ್ತು ಒಮ್ಮತದ ಸಂಪ್ರದಾಯವನ್ನು ನಿರ್ಲಕ್ಷಿಸಿದೆ ಎಂದು ಗಂಭೀರವಾಗಿ ಆರೋಪಿಸಿದೆ.
“NHRC ಎಲ್ಲಾ ನಾಗರಿಕರ ಮೂಲಭೂತ ಮಾನವ ಹಕ್ಕುಗಳನ್ನು ವಿಶೇಷವಾಗಿ ಸಮಾಜದ ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವ ವರ್ಗಗಳಿಂದ ರಕ್ಷಿಸುವ ಕಾರ್ಯವನ್ನು ಹೊಂದಿರುವ ಪ್ರಮುಖ ಶಾಸನಬದ್ಧ ಸಂಸ್ಥೆಯಾಗಿದೆ. ಅರ್ಹತೆ ಮತ್ತು ಒಳಗೊಳ್ಳುವಿಕೆಯ ಅಗತ್ಯತೆ ಎರಡನ್ನೂ ನಾವು ಗಮನದಲ್ಲಿಟ್ಟುಕೊಂಡು ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಮತ್ತು ನ್ಯಾಯಮೂರ್ತಿ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಹಾಗೂ ನ್ಯಾಯಾಧೀಶರಾದ ಎಸ್. ಮುರುಳೀಧರ್ ಮತ್ತು ಅಕಿಲ್ ಅಬ್ದುಲ್ ಹಮೀದ್ ಖುರೇಷಿ ಅವರ ಹೆಸರನ್ನು ಸದಸ್ಯರ ಸ್ಥಾನಕ್ಕೆ ನೇಮಿಸುವಂತೆ ಪ್ರಸ್ತಾಪಿಸಿದ್ದೆವು. ಆದರೆ ನಮ್ಮ ಪ್ರಸ್ತಾಪವನ್ನು ಆಯ್ಕೆ ಸಮಿತಿಯಲ್ಲಿ ತಿರಸ್ಕರಿಸಿರುವುದು ತುಂಬಾ ವಿಷಾದನೀಯ ಸಂಗತಿಯಾಗಿದೆ” ಎಂದು ಕಾಂಗ್ರೆಸ್ ಹೇಳಿದೆ.
ಆಯೋಗದ ಅಧ್ಯಕ್ಷ ಸ್ಥಾನದಲ್ಲಿದ್ದ ಅರುಣ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ಜೂನ್1ಕ್ಕೆ ಮುಕ್ತಾಯಗೊಂಡಿತ್ತು. ಅಲ್ಲಿಂದ ಈ ಹುದ್ದೆ ಖಾಲಿಯಿತ್ತು. ಇದೀಗ ಮಾಜಿ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರನ್ನು ಎನ್ಎಚ್ಆರ್ಸಿ ಅಧ್ಯಕ್ಷರನ್ನಾಗಿ ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಮತ್ತು ಮಾಜಿ ನ್ಯಾಯಮೂರ್ತಿ ವಿದ್ಯುತ್ ರಂಜನ್ ಸಾರಂಗಿ ಅವರನ್ನು ಸದಸ್ಯರನ್ನಾಗಿ ರಾಷ್ಟ್ರಪತಿಯವರು ನೇಮಕ ಮಾಡಿದ್ದಾರೆ’ ಎಂದು ಎನ್ಎಚ್ಆರ್ಸಿ ತನ್ನ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಈ ಸುದ್ದಿಯನ್ನೂ ಓದಿ:Yahya Sinwar: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವರ್ನನ್ನು ಹೊಡೆದುರುಳಿಸಿದ ವಿಡಿಯೊ ರಿಲೀಸ್ ಮಾಡಿದ ಇಸ್ರೇಲ್ ಸೇನೆ