Sunday, 11th May 2025

ಪಾಕ್ ಭಯೋತ್ಪಾದಕ ಮೊಹಮ್ಮದ್ ಆರಿಫ್ ಕ್ಷಮಾದಾನ ಅರ್ಜಿ ವಜಾ

ವದೆಹಲಿ : ಕೆಂಪು ಕೋಟೆ ದಾಳಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಪಾಕ್ ಭಯೋತ್ಪಾದಕ ಮೊಹಮ್ಮದ್ ಆರಿಫ್ ಅಲಿಯಾಸ್ ಅಶ್ಫಾಕ್ ಅವರ ಕ್ಷಮಾದಾನ ಅರ್ಜಿಯನ್ನು ಅಧ್ಯಕ್ಷ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ.

ಜುಲೈ 25, 2022 ರಂದು ಅಧಿಕಾರ ವಹಿಸಿಕೊಂಡ ನಂತರ ರಾಷ್ಟ್ರಪತಿಗಳು ತಿರಸ್ಕರಿಸಿದ ಎರಡನೇ ಕ್ಷಮಾದಾನ ಅರ್ಜಿ ಇದಾಗಿದೆ.

ಈ ಪ್ರಕರಣದಲ್ಲಿ ತನಗೆ ವಿಧಿಸಲಾದ ಮರಣದಂಡನೆಯನ್ನು ದೃಢೀಕರಿಸಿ ಆರಿಫ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ 2022 ರ ನವೆಂಬರ್ 3 ರಂದು ವಜಾಗೊಳಿಸಿತ್ತು.

ಮೇ 15ರಂದು ಆರಿಫ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಮೇ 27ರಂದು ತಿರಸ್ಕರಿಸಲಾಗಿದೆ ಎಂದು ರಾಷ್ಟ್ರಪತಿಗಳ ಸಚಿವಾಲಯದ ಆದೇಶವನ್ನು ಉಲ್ಲೇಖಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *