Sunday, 11th May 2025

ರಾಜ್ಯಸಭೆ ಬಿಜೆಪಿ ನಾಯಕರಾಗಿ ಗೋಯಲ್ ಆಯ್ಕೆ

ನವದೆಹಲಿ: ರಾಜ್ಯ ಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನಾಯಕರಾಗಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಆಯ್ಕೆಯಾಗಿದ್ದಾರೆ.

ಥಾವರ್ ಚಂದ್ ಗೆಹ್ಲೋಟ್ ಅವರು ಕಳೆದ ವಾರ ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡ ನಂತರ ಪಿಯೂಷ್ ಅವರನ್ನು ರಾಜ್ಯಸಭಾ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಮುನ್ನ ಬಿಜೆಪಿ ನಾಯಕರನ್ನಾಗಿ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉಪ ನಾಯಕರನ್ನಾಗಿ ಪಿಯೂಷ್ ಗೋಯಲ್ ಅವರನ್ನು ನೇಮಿಸಲಾಗಿತ್ತು.

2010ರಿಂದ ರಾಜ್ಯಸಭಾ ಸದಸ್ಯರಾಗಿರುವ ಪಿಯೂಷ್ ಗೋಯಲ್, ಕೇಂದ್ರ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು. ಜು.8ರಂದು ವಾಣಿಜ್ಯ, ಕೈಗಾರಿಕೆ, ಆಹಾರ ಹಾಗೂ ಸಾರ್ವಜನಿಕ ಸರಬರಾಜು, ಜವಳಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು.

ರಾಜ್ಯಸಭಾ ನಾಯಕನ ಸ್ಥಾನಕ್ಕೆ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರ ಹೆಸರು ಕೇಳಿಬಂದಿತ್ತು. ಇದೀಗ ಪಿಯೂಷ್ ಗೋಯಲ್ ಅವರು ಅಂತಿಮವಾಗಿ ಆಯ್ಕೆಯಾಗಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಜು.19ರಿಂದ ಆರಂಭವಾಗಲಿದೆ.

Leave a Reply

Your email address will not be published. Required fields are marked *