Thursday, 15th May 2025

ಗುಜರಾತಿನಲ್ಲಿ ಮೂರು ಪ್ರಮುಖ ಯೋಜನೆಗಳಿಗೆ ಪ್ರಧಾನಿ ನಾಳೆ ಚಾಲನೆ

ನವದೆಹಲಿ: ಗುಜರಾತ್‌ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅ 24 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ.

ಕಿಸಾನ್ ಸೂರ್ಯೋದಯ ಯೋಜನೆ’ , ಯು ಎನ್ ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ಹೃದಯ ಚಿಕಿತ್ಸಾ ಆಸ್ಪತ್ರೆ ಹಾಗೂ ಅಹಮದಾಬಾದ್‍ ಸರ್ಕಾರಿ ಆಸ್ಪತ್ರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಟೆಲಿ-ಹೃದ್ರೋಗ ಮೊಬೈಲ್ ಅಪ್ಲಿಕೇಶನ್ ಅನ್ನು ಉದ್ಘಾಟಿಸಲಿದ್ದಾರೆ. ಗಿರ್ನಾರ್‌ನಲ್ಲಿನ ರೋಪ್‌ವೇ ಸಹ ಉದ್ಘಾಟಿಸಲಿದ್ದಾರೆ.

ನೀರಾವರಿಗಾಗಿ ಹಗಲು ವೇಳೆ ವಿದ್ಯುತ್ ಸರಬರಾಜು ಮಾಡಲು ಮುಖ್ಯಮಂತ್ರಿ ವಿಜಯ್ ರೂಪಾನಿ ನೇತೃತ್ವದ ಗುಜರಾತ್ ಸರ್ಕಾರ ಇತ್ತೀಚೆಗೆ ‘ಕಿಸಾನ್ ಸೂರ್ಯೋದಯ ಯೋಜನೆ’ ಘೋಷಿಸಿತ್ತು. ಈ ಯೋಜನೆಯಡಿ ರೈತರ ಜಮೀನುಗಳಿಗೆ ಬೆಳಿಗ್ಗೆ 5 ರಿಂದ ರಾತ್ರಿ 9 ರವರೆಗೆ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ಮೂಲಸೌಕರ್ಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ 3,523 ಕೋಟಿ ರೂ.ನಿಗದಿಪಡಿಸಿದೆ.

ಯು ಎನ್ ಮೆಹ್ತಾ ಸಂಸ್ಥೆ ಇದೀಗ ಹೃದಯಶಾಸ್ತ್ರದ ಭಾರತದ ಅತಿದೊಡ್ಡ ಆಸ್ಪತ್ರೆಯಾಗಲಿದೆ. ಗಿರ್ನಾರ್‌ನಲ್ಲಿ ಪ್ರಧಾನ ಮಂತ್ರಿ ರೋಪ್‌ವೇ ಉದ್ಘಾಟಿಸುವುದರೊಂದಿಗೆ ಕಾರಣ ಗುಜರಾತ್ ಮತ್ತೊಮ್ಮೆ ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಎದ್ದು ಕಾಣಲಿದೆ.

Leave a Reply

Your email address will not be published. Required fields are marked *