Sunday, 11th May 2025

ರಿಕ್ಷಾ ಚಾಲಕರೊಬ್ಬರಿಗೆ 3 ಕೋಟಿ ರೂ. ತೆರಿಗೆ ಪಾವತಿಗೆ ನೋಟೀಸು !

ಮಥುರಾ : ಉತ್ತರ ಪ್ರದೇಶದಲ್ಲಿ ಬಡ ಸೈಕಲ್ ರಿಕ್ಷಾ ಚಾಲಕರೊಬ್ಬರಿಗೆ ಬರೋಬ್ಬರಿ 3 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್‌ ನೀಡಿದೆ.

ಅಮರ್ ಕಾಲೋನಿ ನಿವಾಸಿ ಪ್ರತಾಪ್ ಸಿಂಗ್ ಹೆಸರಿನ ಸೈಕಲ್ ರಿಕ್ಷಾ ಚಾಲಕನಿಗೆ ಈ ಐಟಿ ನೋಟೀಸ್‌ ಸಿಕ್ಕಿದ್ದು, ಆತ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.

ಪ್ರತಾಪ್ ಸಿಂಗ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನ ಹಂಚಿಕೊಂಡಿದ್ದು, ‘ಬ್ಯಾಂಕ್‍ನವರು ಐ.ಟಿ ರಿಟರ್ನ್ ದಾಖಲೆ ಕೇಳಿದ್ದರಿಂದ ಜನ್ ಸುವಿಧಾ ಕೇಂದ್ರದಲ್ಲಿ ಪಾನ್ ಕಾರ್ಡ್‍ಗಾಗಿ ಅರ್ಜಿ ಸಲ್ಲಿಸಿದ್ದೆ. ನಂತರ ಸಂಜಯ್ ಸಿಂಗ್ ಪಾನ್‍ಕಾರ್ಡ್‍ನ ನಕಲು ಪ್ರತಿ ನೀಡಿದ್ದರು. ನಾನು ಅನಕ್ಷರಸ್ಥ ನಾದ್ದರಿಂದ ಮೂಲ ಪಾನ್‍ ಕಾರ್ಡ್ ಹಾಗೂ ನನಗೆ ದೊರೆತ ನಕಲು ಪ್ರತಿಯ ವ್ಯತ್ಯಾಸ ತಿಳಿಯಲಿಲ್ಲ’ ಎಂದಿದ್ದಾರೆ.

ಈ ಚಾಲಕನಿಗೆ ಐಟಿ ಇಲಾಖೆಯಿಂದ 3,47,54,896 ರೂ. ತೆರಿಗೆ ಪಾವತಿಸುವಂತೆ ನೋಟಿಸ್ ಬಂದಿದ್ದು, ಯಾರೋ ಯಾಮಾರಿಸಿ ಜಿಎಸ್‍ಟಿ ಸಂಖ್ಯೆ ಪಡೆದಿದ್ದಾರೆ. ಐಟಿ ಅಧಿಕಾರಿಗಳು 2018-2019ರಲ್ಲಿ ಅವರ ವಹಿವಾಟು 43,44,36,201 ರೂ. ಆಗಿದೆ. ಈ ಕುರಿತು ಎಫ್‍ಐಆರ್ ದಾಖಲಿಸುವಂತೆ ಸಲಹೆ ನೀಡಿದ್ದಾರೆ ಎಂದು ರಿಕ್ಷಾ ಚಾಲಕ ತಿಳಿಸಿದ್ದಾನೆ.

Leave a Reply

Your email address will not be published. Required fields are marked *