Tuesday, 13th May 2025

ಪದ್ಮವಿಭೂಷಣ ಪ್ರಶಸ್ತಿ ಹಿಂತಿರುಗಿಸಿದ ಪಂಜಾಬ್ ನ ಮಾಜಿ ಸಿಎಂ

ಚಂಡೀಗಢ: ಶಿರೋಮಣಿ ಅಕಾಲಿದಳದ ಮುಖ್ಯಸ್ಥ, ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವ ಮೂಲಕ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳಿಗೆ ವಿರೋಧ ವ್ಯಕ್ತಪಡಿಸಿ ದ್ದಾರೆ.

‘ಭಾರತ ಸರ್ಕಾರವು ರೈತರಿಗೆ ಮಾಡಿದ ದ್ರೋಹ ಮತ್ತು ಶಾಂತಿಯುತ ಪ್ರತಿಭಟನೆಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯತೆಯನ್ನು ವಿರೋಧಿಸಿ ಪ್ರಕಾಶ್ ಸಿಂಗ್ ಬಾದಲ್ ಅವರು ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಗುರುವಾರ ಹಿಂದಿರುಗಿಸಿದ್ದಾರೆ’ ಎಂದು ಶಿರೋಮಣಿ ಅಕಾಲಿದಳ ಹೇಳಿಕೆ ಬಿಡುಗಡೆ ಮಾಡಿದೆ.

ರೈತರು ತಮ್ಮ ಮೂಲಭೂತ ಹಕ್ಕನ್ನು ಉಳಿಸಿಕೊಳ್ಳಲು ತೀವ್ರ ಚಳಿಯ ಮಧ್ಯೆಯೂ ಕಹಿ ಹೋರಾಟ ನಡೆಸುತ್ತಿದ್ದಾರೆ ಎಂದು ಬಾದಲ್‌ ಅವರು ಅಭಿಪ್ರಾಯಪಟ್ಟರು.

Leave a Reply

Your email address will not be published. Required fields are marked *