Sunday, 11th May 2025

ಭ್ರಷ್ಟಾಚಾರ ಆರೋಪ: ಪಂಜಾಬ್ ಮಾಜಿ ಸಚಿವರ ಬಂಧನ

ಚಂಡೀಗಢ: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ ಅವರನ್ನು ಭ್ರಷ್ಟಾಚಾರದ ಆರೋಪದಡಿ ವಿಚಕ್ಷಣ ದಳ ಬಂಧಿಸಿದೆ. ಸಾಧು ಸಿಂಗ್ ಧರಂಸೋತ್ ಅವರು ಮಾಜಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ ಕ್ಯಾಬಿನೆಟ್‍ನಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಸಚಿವರಾಗಿದ್ದರು.

ಧರಂಸೋತ್ ಅವರು ಅರಣ್ಯ ಸಚಿವರಾಗಿದ್ದ ವೇಳೆ ಮರಗಳನ್ನು ಕಡಿಯಲು ಅನುಮತಿ ನೀಡುವುದ್ದಕ್ಕೆ ಲಂಚ ಪಡೆಯುತ್ತಿದ್ದರು ಎಂದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಐಎಎಸ್ ಅಧಿಕಾರಿಯೊಬ್ಬರು ಆರೋಪಿಸಿದ್ದರು. ಇದೀಗ ವಿಚಕ್ಷಣ ದಳ, ಧರಂಸೋತ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಅಲ್ಲದೇ ದಲಿತ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬಹುಕೋಟಿ ಹಗರಣದ ಮಾಸ್ಟರ್ ಮೈಂಡ್ ಆರೋಪವೂ ಧರಂಸೋತ್ ಅವರ ಮೇಲೆ ಕೇಳಿ ಬಂದಿದೆ. ಇವರೊಂದಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸ್ಥಳೀಯ ಪತ್ರಕರ್ತ ಕಮಲ್ಜಿತ್ ಸಿಂಗ್ ಅವ ರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಒಂದು ಮರವನ್ನು ಕೊಡಲಿ ಯಿಂದ ಕತ್ತರಿಸಲು ಗುತ್ತಿಗೆದಾರು 500 ರೂ. ದಂಡ ನೀಡಬೇಕಾಗಿತ್ತು ಎಂದು ಆರೋಪಿಸಲಾಗಿದೆ.