Sunday, 11th May 2025

ಲಾಕ್‌’ಡೌನ್ ವೇಳೆ ಮಾನವೀಯತೆ ಮೆರೆದ ರಾಂಚಿಯ ಆಟೋ ಚಾಲಕ

ರಾಂಚಿ : ದೇಶದ ನಾನಾ ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಸೇರಿದಂತೆ ಲಾಕ್ ಡೌನ್ ಗಳನ್ನು ಘೋಷಣೆ ಮಾಡಲಾಗಿದೆ. ಇನ್ನು ಲಾಕ್ ಡೌನ್ ಮಾಡಿದ ವೇಳೆ ಜನರು ಆಸ್ಪತ್ರೆಗಳಿಗೆ ಹೋಗಲು ಸಾರಿಗೆ ವ್ಯವಸ್ಥೆ ಇಲ್ಲದಾಗಿ ಪರದಾಡುತ್ತಿರುವ ವೇಳೆ ಯಲ್ಲೇ ಜಾರ್ಖಂಡ್ ರಾಜ‍ಧಾನಿ ರಾಂಚಿಯಲ್ಲಿ ರಿಕ್ಷಾವಾಲಾ ಮಾನವೀಯತೆ ಮೆರೆದಿದ್ದಾರೆ.

ರಾಂಚಿಯ ಆಟೋ ಚಾಲಕ ರವಿ ಅಗರ್ವಾಲ್ ಕೋವಿಡ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಮತ್ತು ಆಸ್ಪತ್ರೆಗೆ ಹೋಗಬೇಕೆಂದ ವರಿಗೆ ಉಚಿತವಾಗಿ ತನ್ನ ಆಟೋದಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ.

ಕಳೆದ ಏಪ್ರಿಲ್ 15 ರಿಂದ ರವಿಯವರು ತಮ್ಮ ಆಟೋವನ್ನು ಉಚಿತ ಸೇವೆಗಾಗಿ ಇಟ್ಟಿದ್ದಾರೆ. ಮಹಿಳೆಯೊಬ್ಬರು ಆಸ್ಪತ್ರೆಗೆ ಹೋಗಲು ಅಸಹಾಯಕರಾಗಿ ನಿಂತ ವೇಳೆ ಬೇರೆ ಯಾವ ಆಟೋ ಚಾಲಕ ಕೂಡ ಆ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರಾಕರಿಸಿದ್ದಾರೆ. ಆದರೆ, ರವಿ ಅಗರ್ವಾಲ್ ತಾವು ಮುಂದೆ ಬಂದು ಆ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

 

Leave a Reply

Your email address will not be published. Required fields are marked *