Monday, 12th May 2025

ಸಿಬಿಐ ತನಿಖೆಗೆ ಹತ್ರಾಸ್ ಪ್ರಕರಣ: ಇಂದು ಸುಪ್ರೀಂ ವಿಚಾರಣೆ

ನವದೆಹಲಿ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಮತ್ತು ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿಯನ್ನು ಮಂಗಳವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸ ಲಿದೆ.

ಸಿಜೆಐ ಎಸ್.ಎ.ಬೊಬ್ಡೆ ನೇತೃತ್ವದ ಪೀಠ ವಿಚಾರಣೆ ನಡೆಸಲಿದ್ದು, ನಿರ್ಭಯಾ ಅತ್ಯಾಚಾರಿಗಳ ಪ್ರಕರಣ ದಲ್ಲಿ ಅಪರಾಧಿಗಳ ಪರ ವಕಾಲತ್ತು ವಹಿಸಿದ್ದ ವಕೀಲ ಎ.ಪಿ.ಸಿಂಗ್, ಈ ಪ್ರಕರಣ ದಲ್ಲೂ ಆರೋಪಿಗಳ ಪರ ವಕಾಲತ್ತು ವಹಿಸಲಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದ ಹತ್ರಾಸ’ನಲ್ಲಿ 19 ವರ್ಷದ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹಲ್ಲೆ ಮಾಡಿದ್ದರು ಎಂದು ಆರೋಪಿಸ ಲಾಗಿದ್ದು, ಬಳಿಕ ಯುವತಿ ದೆಹಲಿಯ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು.

Leave a Reply

Your email address will not be published. Required fields are marked *