Monday, 12th May 2025

ಶರದ್ ಪವಾರ್ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸ ಲಾಗಿದೆ.

ನವೆಂಬರ್ 2 ರಂದು ಅವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಎನ್ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಸಾಹೇಬ್ ಆರೋಗ್ಯವು ಉತ್ತಮವಾಗಿಲ್ಲದ ಕಾರಣ ಮುಂದಿನ ಮೂರು ದಿನಗಳ ಕಾಲ ಮುಂಬೈನ ಬ್ರೀಜ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸ ಲಾಗುವುದು ಎಂದು ಪಕ್ಷ ಟ್ವೀಟ್ ಮಾಡಿದೆ.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾಜಿರಾವ್ ಗರ್ಜೆ ಅವರು ಮಾಡಿದ ಮನವಿಯ ಪ್ರಕಾರ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯ ಕರ್ತರು ಆಸ್ಪತ್ರೆಯ ಹೊರಗೆ ಸೇರಬಾರದು ಎಂದು ಹೇಳಿದೆ.