Sunday, 11th May 2025

ಸಿಎಂ ಯಡಿಯೂರಪ್ಪ ಬದಲಾವಣೆ ಒಂದು ಕೆಟ್ಟ ಸಲಹೆ: ಸುಬ್ರಹ್ಮಣಿಯನ್ ಸ್ವಾಮಿ

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಬಿಜೆಪಿ ಯಾಕೆ ಹಳೆ ತಪ್ಪುಗಳನ್ನೆ ಮತ್ತೆ ಮಾಡಲು ಮುಂದಾಗಿದೆ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಯಡಿಯೂರಪ್ಪ ಬದಲಾವಣೆ ಒಂದು ಕೆಟ್ಟ ಸಲಹೆ. ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇ ಅವರು. ಕೆಲವರ ಪಾಲಿಗೆ ಯಡಿಯೂರಪ್ಪ ನಿಷ್ಠುರ ಎಂಬ ಕಾರಣಕ್ಕೆ ಅವರನ್ನು ಕೆಳಗಿಳಿಸುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪ ಇಲ್ಲದೇ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಕೆಜೆಪಿಯಿಂದ ಬಿಜೆಪಿಗೆ ಮರಳಿ ಬಂದ ಬಳಿಕವೇ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂಬುದನ್ನು ನೆನಪಿಸಿದ್ದಾರೆ.

Leave a Reply

Your email address will not be published. Required fields are marked *