Thursday, 15th May 2025

ಗಣರಾಜ್ಯೋತ್ಸವದ ದಿನ ರೈತರು ಟ್ರ್ಯಾಕ್ಟರ್ ಪರೇಡ್

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವದ ದಿನ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸಿದರು.

ದೆಹಲಿ ಪ್ರವೇಶಿಸದಂತೆ ಪೊಲೀಸರು ಸರ್ಪಗಾವಲು ಹಾಕಿದ್ದು, ಸಿಂಘೂ, ಟಿಕ್ರಿ ಹಾಗೂ ಗಾಜೀಪುರ ಗಡಿಯಲ್ಲಿ ಲಕ್ಷಾಂತರ ರೈತರು ಜಮಾಯಿಸಿದ್ದು, ಕೆಲವರು ಈಗಾಗಲೇ ತಮ್ಮ ಟ್ರ್ಯಾಕ್ಟರ್ ಜಾಥ ಹೊರಟಿದ್ದಾರೆ.

ಪೊಲೀಸರು ಹಾಕಿದ್ದ ಬ್ಯಾರಿಕೇಟ್ ಗಳನ್ನು ಭೇದಿಸಲು ಮುಂದಾಗಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿ ದ್ದಾರೆ. ದೆಹಲಿಯ ಘಾಜಿಪುರ ಗಡಿಯಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ರೈತರು ಭೇದಿಸಲು ಮುಂದಾಗಿದ್ದಾರೆ. ಮುಂಜಾಗ್ರತಾ ಕ್ರಮ ಹಿನ್ನೆಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

Leave a Reply

Your email address will not be published. Required fields are marked *