Wednesday, 14th May 2025

ವಿಭಜಕದಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ನಾಲ್ವರ ಸಾವು

ವದೆಹಲಿ: ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ರಸ್ತೆ ಮಧ್ಯದ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ನಾಲ್ವರು ಮೃತ ಪಟ್ಟಿದ್ದಾರೆ.

ಕೆಡಿಟಿಸಿ ಡಿಪೋ ಟ್ರಾಫಿಕ್ ಸಿಗ್ನಲ್ ದಾಟಿ ಡಿಎಲïಎಫ್ ಟಿ ಪಾಯಿಂಟ್ ಕಡೆಗೆ ಹೋಗುತ್ತಿದ್ದ ಟ್ರಕ್ ರಸ್ತೆ ವಿಭಜಕದಲ್ಲಿ ಮಲಗಿದ್ದ ಆರು ಜನರ ಮೇಲೆ ಹರಿದಿದೆ ಉಪ ಪೊಲೀಸ್ ಆಯುಕ್ತ ಸತ್ಯಸುಂದರಂ ತಿಳಿಸಿದ್ದಾರೆ.

ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಜಿಟಿಬಿ ಆಸ್ಪತ್ರೆಗೆ ಸಾಗಿಸುವಾಹ ಕೊನೆಯುಸಿರೆಳೆದಿದ್ದಾರೆ.ಟ್ರಕ್ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಅಪಘಾತ ನಡೆದಿದೆ ಎಂದು ತಿಳಿಸಿದ್ದಾರೆ.

ಮೃತರನ್ನು ನ್ಯೂ ಸೀಮಾಪುರಿ ನಿವಾಸಿಗಳಾದ ಕರೀಂ (52), ಚೋಟ್ಟೆ ಖಾನ್ (25), ಶಾ ಆಲಂ (38) ಮತ್ತು ಉತ್ತರ ಪ್ರದೇಶದ ಸಾಹಿಬಾಬಾದ್ ಶಾಲಿಮಾರ್ ಗಾರ್ಡನ್ ನಿವಾಸಿ ರಾಹುಲ್ (45) ಎಂದು ಗುರುತಿಸಲಾಗಿದೆ .ಗಾಯಗೊಂಡವರನ್ನು ಉತ್ತರ ಪ್ರದೇಶದ ಸಾಹಿಬಾಬಾದ್ ಮನೀಶ್ (16) ಮತ್ತು ತಾಹಿರ್ಪುರ ನಿವಾಸಿ ಪ್ರದೀಪ್ (30) ಎಂದು ಗುರುತಿಸಲಾಗಿದೆ. ಇವರೆಲ್ಲರು ಕೂಲಿ ಕಾರ್ಮಿಕರೆಂದು ತಿಳಿದುಬಂದಿದೆ.

ಘಟನೆ ನಂತರ ಪರಾರಿಯಾಗಿರುವ ಟ್ರಕ್ ಚಾಲಕನ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ.