Sunday, 11th May 2025

ಶೀತಗಾಳಿಯಿಂದ ಕಾಶ್ಮೀರ ತತ್ತರ

ಶ್ರೀನಗರ: ಕಣಿವೆ ರಾಜ್ಯ ಶೀತಗಾಳಿಯಿಂದ ತತ್ತರಿಸಿದೆ. ಕಾಶ್ಮೀರದ ಬಹುತೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಶೂನ್ಯಕ್ಕಿಂತ ಕಡಿಮೆ ದಾಖಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕನಿಷ್ಠ ತಾಪಮಾನ 0.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ಐದು ದಿನಗಳಲ್ಲಿ ಮೊದಲ ಬಾರಿಗೆ ನಗರದಲ್ಲಿ ಕನಿಷ್ಠ ತಾಪಮಾನವು ಘನೀಕರಿಸುವ ಹಂತ ಕ್ಕಿಂತ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ಬಂಡಿಪೋರಾ, ಬಾರಾಮುಲ್ಲಾ, ಗಂದರ್ಬಾಲ್, ಕೋಕರ್ನಾಗ್, ಕುಲ್ಗಾಮ್ ಮತ್ತು ಕುಪ್ವಾರದಲ್ಲಿ ಶೂನ್ಯ ಡಿಗ್ರಿ ಸೆಲ್ಸಿಯಸ್ ನಿಂದ 1.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹ ಲ್ಗಾಮ್ ಪ್ರವಾಸಿಧಾಮದಲ್ಲಿ ಮೈನಸ್ 3.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಕಣಿವೆಯ ಅತ್ಯಂತ ಹೆಚ್ಚು ಚಳಿಯ ಸ್ಥಳ ವಾಗಿದೆ. ನಂತರ ಶೋಪಿಯಾನದಲ್ಲಿ ಮೈನಸ್ 2.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Leave a Reply

Your email address will not be published. Required fields are marked *