Sunday, 11th May 2025

ಹತ್ರಾಸ್ ಪ್ರಕರಣ: ವರದಿ ಸಲ್ಲಿಸಲು ಇನ್ನೂ ಹತ್ತು ದಿನ ಗಡುವು

ನವದೆಹಲಿ/ಲಖನೌ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು 10 ದಿನಗಳ ಸಮಯ ವಿಸ್ತರಣೆ ಮಾಡಲಾಗಿದೆ.

ಪ್ರಕರಣದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರವಿಶೇಷ ತನಿಖಾ ತಂಡಕ್ಕೆ 7 ದಿನಗಳಲ್ಲಿ ವರದಿ ಸಲ್ಲಿಸು ವಂತೆ ಗಡುವು ನೀಡಲಾಗಿತ್ತು. ಇದೀಗ ಮತ್ತೆ 10 ದಿನಗಳ ಸಮಯ ವಿಸ್ತರಣೆ ಮಾಡಲಾಗಿದೆ.

ಹತ್ಯಾಸ”ನಲ್ಲಿ ಯುವತಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರಕರಣ ವನ್ನು ಎಸ್ಐಟಿ ತನಿಖೆಗೆ ವಹಿಸಿದ್ದಾರೆ.

Leave a Reply

Your email address will not be published. Required fields are marked *