Monday, 12th May 2025

ನಾಳೆ ಎಲ್ಲಾ ದೇವಾಲಯಗಳಲ್ಲಿ ಗೋವಿನ ಪೂಜೆ

ಬೆಂಗಳೂರು: ನವೆಂಬರ್‌ 14ರಂದು ಎಲ್ಲಾ ದೇವಾಲಯಗಳಲ್ಲಿ ಸಂಜೆ ವಿಶೇಷವಾಗಿ ಗೋವಿನ ಪೂಜೆ ಮಾಡುವುದಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸುವ ಸಲುವಾಗಿ ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು.

ನಂತರ ಗೋವುಗಳನ್ನು ಅರಿಶಿಣ, ಕುಂಕುಮ ಹಚ್ಚಿ ಹೂವುಗಳಿಂದ ಅಲಂಕರಿಸಬೇಕು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸ ವನ್ನು ಅವುಗಳಿಗೆ ನೀಡಬೇಕು. ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿಸಬೇಕು ಎಂದು ಮುಜರಾಯಿ ಇಲಾಖೆ ದೇವಾಲಯಗಳ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ.

Leave a Reply

Your email address will not be published. Required fields are marked *