Thursday, 15th May 2025

ಸಾಲ ಮರುಪಾವತಿ ಮಾಡುವಂತೆ ಕಿರುಕುಳ: ಮಹಿಳೆ ಆತ್ಮಹತ್ಯೆ

ಮೈಸೂರು: ವಿವಿಧ ಸಂಘಗಳಲ್ಲಿ ಸಾಲವನ್ನು ಪಡೆದಿದ್ದ ಮಹಿಳೆಗೆ ಸಂಘದ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಮಂಡಿ ಎಂಬಲ್ಲಿ ನಡೆದಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಶಹನಾ ಶರೀಫ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಸಂಘಗಳಲ್ಲಿ ಶಹನಾ ತಲಾ 50,000 ಸಾಲ ಪಡೆದಿದ್ದರು. ಪತಿಗೆ ಗೂಡ್ಸ್ ವಾಹನ ಕೊಡಿಸುವ ಸಲುವಾಗಿ ಸಾಲ ಪಡೆದಿದ್ದರು ಎಂದು ಹೇಳಲಾಗುತ್ತಿದೆ.

ಈ ರೀತಿ ವಿವಿಧ ಸಂಘಗಳಲ್ಲಿ ಸಾಲವನ್ನು ಪಡೆದಿದ್ದರು. ಮೂರು ತಿಂಗಳ ಹಿಂದೆ ಪಡೆದಿದ್ದ ಸಾಲಕ್ಕೆ 50,000 ಬಡ್ಡಿಯನ್ನು ಕೂಡ ಕಟ್ಟಿದ್ದರು. ಬಡ್ಡಿ ಹಣ ಕಟ್ಟಿದ್ದರು ಕೂಡ ಸಂಘದ ಮೂವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಎರಡು ದಿನಗಳ ಹಿಂದೆ ಮೂವರು ಮನೆಗೆ ನುಗ್ಗಿ ಮೊಬೈಲ್ ಕಿತ್ತುಕೊಂಡು ಹೋಗಿದ್ದರು.

ಇದರಿಂದ ಬೇಸತ್ತು ಗ್ರಹಿಣಿ ಶಹಣ ಶರೀಫ್ (25) ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸ್ಥಳಕ್ಕೆ ಬಂಡಿ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಘಟನೆ ಕುರಿತಂತೆ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *