Thursday, 15th May 2025

ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದಲ್ಲಿನ ಗ್ರಾಮಸ್ಥರು ಗ್ರಾಮದ ಒಳಗೆ ಪ್ರವೇಶಿಸದಂತೆ ಘೇರಾವ್ ಹಾಕಿದ ಘಟನೆ ನಡೆದಿದೆ.

ವರುಣಾ ಕ್ಷೇತ್ರದ ಮುದ್ದುಬೀರನಹುಂಡಿ ಗ್ರಾಮದ ಕುಂದು ಕೊರತೆ ಆಲಿಸಲು ತೆರಳಿದ್ದ ವೇಳೆ ಗ್ರಾಮಸ್ಥರು ಘೇರಾವ್ ಹಾಕಿ ಇಲ್ಲಿಂದ ಹೋಗಿ ಎಂದು ಎಳೆದಾಡಿದಾಡಿದ್ದಾರೆ.

ಜನರನ್ನು ಸಮಾಧಾನಮಾಡಲು ಸಾಧ್ಯವಾಗದೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದರು. ಆದರೆ ಪೊಲೀಸರ ಮಾತಿಗೂ ಬಗ್ಗದ ಗ್ರಾಮಸ್ಥರು ಗಲಾಟೆ ಮಾಡಿದ್ದಾರೆ. ಗ್ರಾಮದ ಅಭಿವೃದ್ಧಿ ವಿಚಾರಕ್ಕೆ ಗ್ರಾಮಸ್ಥರು ಗರಂ ಆಗಿದ್ದಾರೆ. ಇದೇ ವಿಚಾರಕ್ಕೆ ಯತೀಂದ್ರ ಸಿದ್ದರಾಮಯ್ಯ ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.

ಕೊನೆಗೆ ಯತೀಂದ್ರ  ಮಾತನಾಡದೆ ಅಲ್ಲಿಂದ ತೆರಳಿದ ದೃಶ್ಯ ಸೆರೆಯಾಗಿದೆ. ಮಹಿಳೆಯರು ಕೂಡ ಯತೀಂದ್ರ ವಿರುದ್ಧ ಸಿಟ್ಟು, ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳದಲ್ಲಿ ನೂಕಾಟ, ತಳ್ಳಾಟ ನಡೆದು ಗೊಂದಲದ ವಾತಾವರಣ ಸೃಷ್ಟಿಯಾಯಿತು.

Leave a Reply

Your email address will not be published. Required fields are marked *