Thursday, 15th May 2025

ಆಕಾಶವಾಣಿ ಭವನದಲ್ಲಿ ಅಗ್ನಿ ಅವಘಡ

ನವದೆಹಲಿ: ದೆಹಲಿಯ ಆಕಾಶವಾಣಿ ಭವನದಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಎಂಟು ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಹಾನಿಯುಂಟಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್‌ಎಸ್) ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ. ಕೆಲವು ವಿದ್ಯುತ್ ಉಪಕರಣಗಳಿಂದ ಈ ಅವಘಡ ಸಂಭವಿಸಿದೆ ಎಂದು ಅತುಲ್ ಗರ್ಗ್​ ಹೇಳಿದ್ದಾರೆ.

Leave a Reply

Your email address will not be published. Required fields are marked *