Sunday, 11th May 2025

ಜೋಡಿ ಹತ್ಯೆ: ಗ್ರಾಮ ಪಂಚಾಯಿತಿ ಸದಸ್ಯನ ಸಾವು

ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ನಲ್ಲಿ ಶನಿವಾರ ರಾತ್ರಿ ನಡೆದಿರುವ ಡಬಲ್ ಮರ್ಡರ್ ಪ್ರಕರಣದಲ್ಲಿ ಅನೈತಿಕ ಸಂಬಂಧಕ್ಕೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಹೆಣವಾಗಿ ಹೋಗಿದ್ದಾನೆ.

ತಾಲೂಕಿನ ಚಂದಾಪುರದಲ್ಲಿ ಪ್ರಕರಣ ನಡೆದಿದ್ದು, ಪಕ್ಷವೊಂದರ ಮುಖಂಡ ಚಿಕ್ಕ ಹಾಗಡೆ ನಾರಾಯಣಸ್ವಾಮಿ ತನ್ನ ಪ್ರೇಯಸಿ ಕಾವ್ಯಳೊಂದಿಗೆ ಬಾಡಿಗೆ ಮನೆಯಲ್ಲಿದ್ದ ವೇಳೆ ಹತ್ಯೆ ಮಾಡಲಾಗಿದೆ. ಇಬ್ಬರು ಮನೆಯಲ್ಲಿದ್ದ ವೇಳೆ ರೊಚ್ಚಿಗೆದ್ದ ಕಾವ್ಯಳ ಗಂಡ ಇಬ್ಬಳನ್ನು ಕೊಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ನಾರಾಯಣಸ್ವಾಮಿಯನ್ನು ಬಾಗಿಲ ಹತ್ತಿರ ಕೊಲೆ ಮಾಡಲಾಗಿದ್ದು, ಒಳಗಡೆ ಆತನ ಪ್ರೇಯಸಿ ಕಾವ್ಯಳನ್ನ ಹತ್ಯೆ ಮಾಡಲಾಗಿದೆ. ಅಕ್ರಮ ಸಂಬಂಧಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಘಟನಾ ಸ್ಥಳಕ್ಕೆ ಎಎಸ್ಪಿ ಲಕ್ಷ್ಮಿ ಗಣೇಶ್​, ಡಿವೈಎಸ್ಪಿ ಎಂ ಮಲ್ಲೇಶ್​​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.