Monday, 19th May 2025

100 ದಿನ, 27 ರಾಷ್ಟ್ರ, 30,000 ಕಿ.ಮೀ.

ಸದ್ಗುರು ಜಗ್ಗಿ ವಾಸುದೇವ್ ಏಕಾಂಗಿ ಬೈಕ್ ಪ್ರಯಾಣ

ಕೊಯಮತ್ತೂರು: ಸದ್ಗುರು ಜಗ್ಗಿ ವಾಸುದೇವ್ ಶನಿವಾರ ಇಲ್ಲಿನ ಈಶಾ ಯೋಗ ಕೇಂದ್ರದಿಂದ ಮಣ್ಣು ಸಂರಕ್ಷಿಸುವ (SAVE SOIL) ಜಾಗತಿಕ ಆಂದೋಲನದ ಭಾಗವಾಗಿ 100 ದಿನಗಳಲ್ಲಿ 27 ರಾಷ್ಟ್ರಗಳಲ್ಲಿ 30000 ಕಿಮೀ ದೂರ ಏಕಾಂಗಿಯಾಗಿ ಮೋಟಾರ್ ಸೈಕಲ್ ಪ್ರಯಾಣ ಆರಂಭಿಸಿ ದರು.

ಈ ಪ್ರಯಾಣದ ಮೂಲಕ 27 ರಾಷ್ಟ್ರಗಳ ನಾಯಕರ ಭೇಟಿ ಮಾಡಲಿರುವ ಸದ್ಗುರು, ತಮ್ಮ ದೇಶಗಳಲ್ಲಿ ಮಣ್ಣನ್ನು ಉಳಿಸಲು ತುರ್ತು ನೀತಿ ಕ್ರಮವನ್ನು ಪ್ರಾರಂಭಿಸಲು ಒತ್ತಾಯಿಸಲಿzರೆ. ನೀವು ಕೃಷಿ ಭೂಮಿಯನ್ನು ಹೊಂದಿದ್ದರೆ, ಕನಿಷ್ಠ ಶೇಕಡಾ 3-6ರಷ್ಟು ಸಾವಯವ ಅಂಶವು ಮಣ್ಣಿನಲ್ಲಿ ಇರಬೇಕು ಎಂಬ ನೀತಿಯನ್ನು 192 ದೇಶಗಳಲ್ಲಿ ತರುವ ಪ್ರಯತ್ನದಿಂದಾಗಿ ಈ ಚಳವಳಿ ಆರಂಭವಾಗಿದೆ. ಇದು ಭವಿಷ್ಯದ ಪೀಳಿಗೆಗೆ ನಮ್ಮ ಜವಾ ಬ್ದಾರಿಯಾಗಿದೆ ಎಂದು ಈ ಸಂದರ್ಭದಲ್ಲಿ ಜಗ್ಗಿ ವಾಸುದೇವ್ ಹೇಳಿದರು.

ಈಶಾ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರು ಜಗ್ಗಿ ವಾಸುದೇವ್, ಮಾರ್ಚ್ 21ರಂದು ಇಂಗ್ಲೆಂಡ್‌ನಿಂದ ತಮ್ಮ 30000- ಕಿಲೋ ಮೀಟರ್ ಏಕಾಂಗಿ ಬೈಕ್ ಪ್ರಯಾಣ ಆರಂಭಿಸಲಿದ್ದಾರೆ. ಯುಎನ್ ಕನ್ವೆನ್ಶನ್ ಟು ಕಾಂಬ್ಯಾಟ್ ಡೆಸರ್ಟಿಫಿಕೇಶನ್ (ಯುಎನ್ ಸಿಸಿಡಿ) ಜತೆ ಕನ್ವೆನ್ಷನ್ ಆಫ್ ಪಾರ್ಟಿಟೀಸ್ (COP15)ನ ೧೫ ನೇ ಅಧಿವೇಶನವನ್ನು ಉದ್ದೇಶಿಸಿಯೂ ಸದ್ಗುರು ಮಾತನಾಡಲಿದ್ದಾರೆ. ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಯಲ್ಲಿ(ಡಬ್ಲ್ಯುಇಎಫ್) ವ್ಯಾಪಾರ, ರಾಜಕೀಯ ಮತ್ತು ಸಾಮಾಜಿಕ ನಾಯಕರ ಅಂತರರಾಷ್ಟ್ರೀಯ ಸಮುದಾಯವನ್ನು ಉದ್ದೇಶಿಸಿ ಮಾತ ನಾಡಲಿದ್ದಾರೆ.

ಯುನೈಟೆಡ್ ನೇಷನ್ಸ್ ಕನ್ವೆನ್ಷನ್ (UNCCD), ಯುನೈಟೆಡ್ ನೇಷನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಂ (UNEP) ಮತ್ತು ವಿಶ್ವ ಆಹಾರ ಕಾರ್ಯಕ್ರಮ (WFP) ಕೆಲವು ಜಾಗತಿಕ ಏಜೆನ್ಸಿಗಳು ಮಣ್ಣು ಉಳಿಸಿ ಚಳವಳಿಯೊಂದಿಗೆ ಪಾಲುದಾರಿಕೆ ಹೊಂದಿವೆ.