Tuesday, 13th May 2025

ಶ್ರೇಯಸ್ ಅಯ್ಯರ್’ಗೆ ಏ.8 ರಂದು ಶಸ್ತ್ರಚಿಕಿತ್ಸೆ

ಮುಂಬೈ: ಭುಜದ ಗಾಯದಿಂದ ಬಳಲುತ್ತಿರುವ ಭಾರತದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, ಇದೇ ಏ.8 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

ಮಾರ್ಚ್ 23 ರಂದು ಪುಣೆಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ವೇಗಿ ಶಾರ್ದುಲ್ ಠಾಕೂರ್ ಬೌಲಿಂಗ್‌ನಲ್ಲಿ ಜಾನಿ ಬೈಸ್ಟೋ ಹೊಡೆದ ಚೆಂಡನ್ನು ತಡೆಯುವ ಯತ್ನದಲ್ಲಿ ಅಯ್ಯರ್, ಭುಜಕ್ಕೆ ಗಾಯಮಾಡಿಕೊಂಡಿದ್ದರು. ತೀವ್ರವಾದ ನೋವಿನಿಂದಾಗಿ ಅವರು ಭುಜವನ್ನು ಹಿಡಿದುಕೊಂಡೇ ಮೈದಾನದಿಂದ ಹೊರ ನಡೆದಿದ್ದರು.

‘ಭುಜದ ಗಾಯದಿಂದ ಬಳಲುತ್ತಿರುವ ಶ್ರೇಯಸ್, ಏ.8 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ. ಶ್ರೇಯಸ್ ಗಾಯದಿಂದ ಚೇತರಿಸಿಕೊಳ್ಳಲು ಕನಿಷ್ಠ ನಾಲ್ಕು ತಿಂಗಳ ಸಮಯ ಹಿಡಿಯುವ ಸಾಧ್ಯತೆ ಇದೆ. ಈ ಕುರಿತಂತೆ ಕಳೆದ ವಾರ ಟ್ವೀಟ್ ಮಾಡಿದ್ದ ಅವರು, ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದು ಹೇಳಿದ್ದರು.

ಶ್ರೇಯಸ್ ಅಯ್ಯರ್ ಅವರು ಗಾಯಗೊಂಡಿರುವುದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ವಿಕೆಟ್‌ ಕೀಪರ್‌ ರಿಷಬ್ ಪಂತ್‌ ಮುನ್ನಡೆಸಲಿದ್ದಾರೆ. ಏಪ್ರಿಲ್ 9ರಿಂದ ಐಪಿಎಲ್ ಸರಣಿ ಆರಂಭವಾಗಲಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *