Sunday, 11th May 2025

CM Siddaramaiah: ಕೆಎಸ್‌ಆರ್‌ಟಿಸಿ ನೌಕರರಿಗೆ ಸಿಹಿ ಸುದ್ದಿ, ನಗದು ರಹಿತ ಚಿಕಿತ್ಸೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ksrtc workers

ಬೆಂಗಳೂರು : ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ʼಕೆಎಸ್‌ಆರ್‌ಟಿಸಿ ಆರೋಗ್ಯʼ ಕಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಚಾಲನೆ ನೀಡಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ʼಕೆಎಸ್‌ಆರ್‌ಟಿಸಿ ಆರೋಗ್ಯʼ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆಎಸ್‌ಆರ್‌ಟಿಸಿ ಆರೋಗ್ಯ”ಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು, ಮಾನ್ಯ ಅಧ್ಯಕ್ಷರು, ಕೆ.ಎಸ್.ಆರ್.ಟಿ.ಸಿ ಹಾಗೂ ಶಾಸಕರು, ಗುಬ್ಬಿ ವಿಧಾನಸಭಾ ಕ್ಷೇತ್ರ ಹಾಗೂ ಉಪಾಧ್ಯಕ್ಷರು, ಕೆ.ಎಸ್.ಆರ್.ಟಿ.ಸಿ ಅವರು ಉಪಸ್ಥಿತಿ ವಹಿಸಲಿದ್ದಾರೆ. ಶಿವಾಜಿನಗರ ಶಾಸಕರು ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಸಚಿವರುಗಳು, ಸಂಸದರುಗಳು, ಶಾಸಕರುಗಳು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಮತ್ತು ಒಡಂಬಡಿಕೆ ಮಾಡಿಕೊಳ್ಳುವ ಆಸ್ಪತ್ರೆಗಳ ಮುಖ್ಯಸ್ಥರುಗಳು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *