Monday, 12th May 2025

ಚುನಾವಣೆ ಹಿನ್ನೆಲೆ: ಅಕ್ರಮ ತಡೆಗೆ ಕಾರ್ಯಾಚರಣೆ-100 ಕೋಟಿ ರೂ. ನಗದು ವಶ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ರಾಜ್ಯಾದ್ಯಂತ ಈವರೆಗೆ 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಗುರುವಾರ ಒಂದೇ ದಿನ ವಿವಿಧ ತನಿಖಾ ಸಂಸ್ಥೆಗಳು 4.60 ಕೋಟಿ ರೂ. ನಗದನ್ನು ಜಪ್ತಿ ಮಾಡಿವೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರಾಜ್ಯದಲ್ಲಿ ಒಟ್ಟು 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ 1.91 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ. 85 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 3.49 ಲಕ್ಷ ರೂ. ಮೌಲ್ಯದ 5 ಕೆ.ಜಿ ಬೆಳ್ಳಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರಾಜ್ಯದಲ್ಲಿ 100.33 ಕೋಟಿ ರೂ. ನಗದು, 22.06 ಕೋಟಿ ರೂ. ಮೌಲ್ಯದ ಉಚಿತ ಕೊಡುಗೆಗಳನ್ನು ಜಪ್ತಿ ಮಾಡಲಾಗಿದೆ.

66.35 ಕೋಟಿ ರೂ. ಮೌಲ್ಯದ 17.28 ಲಕ್ಷ ಲೀಟರ್ ಮದ್ಯ, 16.98 ಕೋಟಿ ರೂ. ಮೌಲ್ಯದ 1.249 ಕೆಜಿ ಮಾದಕ ವಸ್ತುಗಳು. 76.01 ಕೋಟಿ ರೂ. ಮೌಲ್ಯದ 149.31 ಕೆ.ಜಿ ಚಿನ್ನ, 4.43 ಕೋಟಿ ರೂ. ಮೌಲ್ಯದ 636.46 ಕೆ.ಜಿ ಬೆಳ್ಳಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಒಟ್ಟು 80.44 ಕೋಟಿ ರೂ ಮೊತ್ತ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಒಟ್ಟು 286.17 ಕೋಟಿ ರೂ.ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ರಾಜ್ಯಾದ್ಯಂತ 2.178 ಎಫ್ ಐಆರ್. 69,801 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ.