Sunday, 11th May 2025

ಬೀದಿಯಲ್ಲಿ ಮಾತನಾಡುವವರು, ಯಾಕೆ ಸದನದಲ್ಲಿ ಮಾತನಾಡಲಿಲ್ಲ: ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯ

ರಾಮನಗರ: ಸುಳ್ಳು ಹೇಳುವುದಕ್ಕೂ ಒಂದು ಮಿತಿ ಇದೆ. ಜಾತಿಗಣತಿ ವಿಚಾರದಲ್ಲಿ ಸದನದಲ್ಲಿ ಸಿದ್ದರಾಮಯ್ಯನವರು ಮಾತನಾಡಬಹುದಿತ್ತು, ಯಾಕೆ ಸದನದಲ್ಲಿ ಮಾತನಾಡಲಿಲ್ಲ,” ಎಂದು ರಾಮನಗರದ ಬಿಡದಿಯ ಕೇತುಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಪ್ರಶ್ನಿಸಿದರು.

ನನ್ನ ವಿಚಾರವನ್ನು ಮಾತನಾಡಿಲ್ಲ ಅಂದರೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನಿದ್ದೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದರು.

“ಸಿದ್ದರಾಮಯ್ಯನವರು ಈ ಬಾರಿಯ ವಿಧಾನಸಭೆ ಅಧಿವೇಶನದಲ್ಲಿ 10 ದಿನ ಏನೆಲ್ಲ ಚರ್ಚೆ ಮಾಡಿದ್ದಾರೆ ಎಂದು ನೋಡಿದ್ದೀರಿ, ಸದನದಲ್ಲಿ ಜನಗಣತಿ ವಿಚಾರ ವಾಗಿ ಚರ್ಚೆ ಮಾಡಿದ್ದರೆ, ನಾಡಿನ ಜನತೆಗೆ ಸತ್ಯ ಇಡಬಹುದಿತ್ತಲ್ಲ. ಈ ವಿಚಾರವನ್ನು ಬೀದಿಯಲ್ಲಿ ಮಾತನಾಡುವುದು ಅವರ ಇಬ್ಬಗೆಯ ನೀತಿ ತೋರಿಸು ತ್ತದೆ,”ಎಂದು ಕಿಡಿಕಾರಿದರು.

ಸೋಮವಾರದಿಂದ ರಾಮನಗರ ಜಿಲ್ಲೆ ಬಿಡದಿಯ ತೋಟದ ಮನೆಯಲ್ಲಿ 4 ದಿನಗಳ ಕಾಲ ಜೆಡಿಎಸ್ ಮಿಷನ್- 123 ಕಾರ್ಯಾಗಾರಕ್ಕೆ ಚಾಲನೆ ಸಿಗಲಿದೆ. ಕಾರ್ಯಾಗಾರದಲ್ಲಿ 123 ಜನ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂದು ಮಾಜಿ‌ ಸಿಎಂ ತಿಳಿಸಿದ್ದಾರೆ.

Leave a Reply

Your email address will not be published. Required fields are marked *