Wednesday, 14th May 2025

ಐತಿಹಾಸಿಕ ಬಜೆಟ್: ಮಹಾಂತೇಶ ಗಿಡ್ಡಪ್ಪಗೋಳ

ಕೊಲ್ಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ ಎಂದು ಪ ಪಂ ಸದಸ್ಯ ಮಹಾಂತೇಶ ಗಿಡ್ಡಪ್ಪಗೋಳ ಹೇಳಿದ್ದಾರೆ.

ಬಸವನ ಬಾಗೇವಾಡಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ, ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು, ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಹೀಗೆ ಅನೇಕ ಜನಪರ ಯೋಜನೆಗಳನ್ನು ಹಾಕಿಕೊಂಡು ಭವಿಷ್ಯದ ಯೋಜನೆಗಳಿಗೆ ರೂಪುರೇಷೆ ನೀಡುವ ಮೂಲಕ ರಾಜ್ಯದ ಅಭಿವೃದ್ಧಿಯ ಮುನ್ನೋಟ ಬೆರೆಯುವಂತಹ ಬಜೆಟ್ ಮಂಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *