Saturday, 10th May 2025

ಕೆಪಿಎಸ್ಸಿ ಪರೀಕ್ಷೆ ಮುಂದೂಡಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು : ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿತ್ತು. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ಗಳು ಗೊಂದಲಕ್ಕೆ ಕಾರಣವಾಗಿತ್ತು. ಆದರೆ ಈಗ ಡಿಸೆಂಬರ್ ನಲ್ಲಿ ನಿಗದಿಯಾಗಿದ್ದ ಕೆಪಿಎಸ್ಸಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ಕೇಂದ್ರ ಲೋಕಸೇವಾ ಅಯೋಗ ಪರೀಕ್ಷೆಗಳು 2021 ರ ಜನವರಿ 8 ರಿಂದ 10 ರವರೆಗೆ ಹಾಗೂ 16, 17 ರಂದು ನಡೆಯಲಿವೆ. ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಗಳು 2020 ರ ಡಿ.21 ರಿಂದ 24 ಮತ್ತು ಜನವರಿ 02 ರಿಂದ 05 ರವರೆಗೆ ನಿಗದಿಯಾಗಿವೆ.

ಕೆಪಿಎಸ್‌ಸಿ ಮತ್ತು ಯುಪಿಎಸ್‌ಸಿ ಪರೀಕ್ಷೆಗಳ ನಡುವೆ ಅಂತರ ಕಡಿಮೆ ಇರುವ ಕಾರಣ ಎರಡೂ ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿ ಗಳಿಗೆ ಸಿದ್ಧತೆ ನಡೆಸಲು ಕಷ್ಟವಾಗುತ್ತಿದೆ. ಈ ಹಿನ್ನೆಲೆ ಅಭ್ಯರ್ಥಿಗಳು ‘ಕೆಪಿಎಸ್‌ಸಿ ವೇಳಾಪಟ್ಟಿಯನ್ನು ಪರಿಷ್ಕರಿಸಿ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳು ಮುಂದೂಡಬೇಕೆಂದು’ ಅಭ್ಯರ್ಥಿಗಳು ಆಗ್ರಹಿಸಿದ್ದರು.

 

Leave a Reply

Your email address will not be published. Required fields are marked *