Wednesday, 14th May 2025

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಳೆ ರಾಜ್ಯಕ್ಕೆ ಆಗಮನ

ಬೆಂಗಳೂರು: ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನ.6ರಂದು ಕರ್ನಾಟಕಕ್ಕೆ ಆಗಮಿ ಸುತ್ತಿದ್ದು, ಕೆಪಿಸಿಸಿ ವತಿಯಿಂದ ನ.6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳ ಲಾಗಿದೆ.

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ.

ಖರ್ಗೆ ರಾಜ್ಯಕ್ಕೆ ಆಗಮನದ ಹಿನ್ನೆಲೆ ಕೈ ನಾಯಕರು ಭರ್ಜರಿ ಸಿದ್ದತೆ ನಡೆಸಿದ್ದು, ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ನಡೆಸ ಲಾಗುತ್ತಿದೆ. ನಾಳೆ ಮಧ್ಯಾಹ್ನ 2.30 ಕ್ಕೆ ಸಮಾವೇಶ ಆರಂಭವಾಗ ಲಿದೆ.

ಟೋಲ್ ಗೇಟ್, ಹೆಬ್ಬಾಳ, ಮೇಖ್ರಿ ಸರ್ಕಲ್ ಬಳಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ. ಕಾರ್ಯಕ್ರಮದಲ್ಲಿ 50 ಸಾವಿರ ಜನರು ಸೇರಲಿದ್ದು, ರಣದೀಪ್ ಸಿಂಗ್ ಸುರ್ಜೆವಾಲಾ, ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಹಾಜರಿರಲಿದ್ದಾರೆ.