Saturday, 10th May 2025

Pralhad Joshi: ಹಗರಣಗಳಲ್ಲಿ ತೊಡಗಿ ಅಭಿವೃದ್ಧಿಯನ್ನೇ ಮರೆತ ಸಿದ್ದರಾಮಯ್ಯ ಸರ್ಕಾರ; ಜೋಶಿ ಆರೋಪ

Pralhad Joshi

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸರ್ಕಾರ ನಾನಾ ಹಗರಣ, ಭ್ರಷ್ಟಾಚಾರದ ಮೂಲಕ ಜನರ ಹಣ ಲೂಟಿ ಹೊಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಮುಡಾ ಹಗರಣದಲ್ಲಿ (MUDA Scam) ಭಾಗಿ ಅಗಿದ್ದಾರೆ. ಇಂಥವರಿಂದ ರಾಜ್ಯ ಮತ್ತು ಸಾಮಾಜಿಕ ಅಭಿವೃದ್ಧಿ ನಿರೀಕ್ಷಿಸಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬರೀ ಹಗರಣಗಳಲ್ಲೇ ತೊಡಗಿದೆ. ಮುಡಾ, ವಾಲ್ಮೀಕಿ, ಅಬಕಾರಿ ಹೀಗೆ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿ ಜನರ ಹಣ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಸುದ್ದಿಯನ್ನೂ ಓದಿ | Pralhad Joshi: ‘ಪಿಎಂ ಸೂರ್ಯ ಘರ್ʼ ಯೋಜನೆ; ಶೂನ್ಯ ಬಂಡವಾಳದಲ್ಲಿ ಜನರೇ ವಿದ್ಯುತ್ ಉತ್ಪಾದಕರಾಗಬಹುದು!

ರಾಜ್ಯ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುತ್ತಿಲ್ಲ, ರಾಜ್ಯದ ಅಭಿವೃದ್ಧಿಗೂ ಗಮನ ಹರಿಸುತ್ತಿಲ್ಲ. ಬದಲಾಗಿ ಬರೀ ಹಗರಣಗಳಿಗೆ ಸೀಮಿತವಾಗಿದೆ ಎಂದು ದೂರಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲೇ ಅಧಿಕಾರಕ್ಕೆ ಬರಲಿ ಭ್ರಷ್ಟಾಚಾರಕ್ಕೆ ಇಳಿಯುತ್ತದೆ. ಕರ್ನಾಟಕವೇ ಇದಕ್ಕೊಂದು ನಿದರ್ಶನ ಎಂದು ಹೇಳಿದರು.

ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಧಕ್ಕೆ ಬೇಡ: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ಎಲ್ಲರೂ ಕೈ ಜೋಡಿಸಲಿ. ಅದು ಬಿಟ್ಟು ಅಹಿತಕರ ಘಟನೆಗಳಿಗೆ ಕುಮ್ಮಕ್ಕು ನೀಡುವುದಲ್ಲ ಎಂದು ಸಮಾಜವಾದಿ ಪಾರ್ಟಿ ನಾಯಕರಿಗೆ ಸಚಿವ ಜೋಶಿ ಚಾಟಿ ಬೀಸಿದರು.

ಈ ಸುದ್ದಿಯನ್ನೂ ಓದಿ | Nail Art Expert Interview: ಯುವತಿಯರನ್ನು ಆಕರ್ಷಿಸುತ್ತಿರುವ ನೇಲ್ ಆರ್ಟ್ ಟ್ರೆಂಡ್ ಬಗ್ಗೆ ಇಲ್ಲಿದೆ ಉಪಯುಕ್ತ ಟಿಪ್ಸ್

ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಸರ್ಕಾರ ಇದ್ದಾಗಲೂ ಇದಕ್ಕಿಂತ ತೀವ್ರ ಸ್ವರೂಪದ ಗಲಾಟೆ, ಹಿಂಸಾಚಾರ ನಡೆದಿವೆ. ಅವನ್ನೊಮ್ಮೆ ಮೆಲುಕು ಹಾಕಲಿ. ಆಮೇಲೆ ನಮಗೆ ಪಾಠ ಹೇಳಲು ಬರಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ನಾಯಕರಿಗೆ ತಿರುಗೇಟು ನೀಡಿದರು.