Tuesday, 13th May 2025

ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ: ಸವದಿ ಸ್ಪಷ್ಟನೆ

ವಿಜಯಪುರ : ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟ ಪಡಿಸಿದ್ದಾರೆ. ಬಿಎಂಟಿಸಿ ಬಸ್ ದರ ಹೆಚ್ಚಳದ ನಂತರ ಸಾರಿಗೆ ಬಸ್ ಪ್ರಯಾಣದ ದರ ಕೂಡ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿತ್ತು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಕಳೆದ ವರ್ಷವೇ ಬಸ್ ಟಿಕೆಟ್ ದರ ಹೆಚ್ಚಿಸ ಲಾಗಿದೆ. ಕೊರೋನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ. ಹೀಗಾಗಿ ಮತ್ತೆ ಸಾರಿಗೆ ಬಸ್ ಪ್ರಯಾಣದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳದ ಪ್ರಸ್ತಾವನೆಯೇ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.

 

Leave a Reply

Your email address will not be published. Required fields are marked *