ಚನ್ನಪಟ್ಟಣ: ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರೊಬ್ಬರು (School Head Master) ವಿಷ ಕುಡಿದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ (Channapatna news) ತಾಲೂಕಿನ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಕೆಲಸದ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚನ್ನಪಟ್ಟಣ ತಾಲೂಕಿನ ಎಲೆತೋಟದಳ್ಳಿಯ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಸುಖೇಂದ್ರ (58) ಮೃತ ಶಿಕ್ಷಕ. ಶಾಲೆಯಲ್ಲಿ ಎಲ್ಲಾ ಕಾರ್ಯವನ್ನು ನಿಗದಿತ ಸಮಯಕ್ಕೆ ಮುಗಿಸಬೇಕೆಂದು ಇಲಾಖೆಯಿಂದ ಒತ್ತಡ ಇತ್ತು ಎನ್ನಲಾಗಿದೆ. ಒತ್ತಡವಿದ್ದುದರಿಂದಲೇ ನಮ್ಮ ತಂದೆ […]