ಲಖನೌ: ಪಶ್ಚಿಮ ಬಂಗಾಳ ಮಾಜಿ ರಾಜ್ಯಪಾಲ ಕೇಸರಿನಾಥ ತ್ರಿಪಾಠಿ(88) ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮೃತಪಟ್ಟಿದ್ದಾರೆ. ಕೆಲವು ವಯೋಸಹಜ ಕಾಯಿಲೆ ಯಿಂದ ಬಳಲುತ್ತಿದ್ದರು. ಡಿಸೆಂಬರ್ನಲ್ಲಿ ಬಿದ್ದು ಕೈ ಮುರಿದುಕೊಂಡಿದ್ದರು. ಅದೇ ಸಮಯದಲ್ಲಿ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡ ಹಿನ್ನೆಲೆ ಯಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿತ್ತು. ಆಹಾರ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದರು. ಮೂತ್ರ ಹೋಗು ತ್ತಿರಲಿಲ್ಲ. ಹೀಗಾಗಿ ಕೆಲ ದಿನ ಐಸಿಯುವಿನಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಕೇಸರಿನಾಥ್ ತ್ರಿಪಾಠಿ ಮೂಲತಃ ಉತ್ತರ ಪ್ರದೇಶದ ಅಲಹಾಬಾದ್ನವರು. 1934ರಲ್ಲಿ […]