ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಶನಿವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಚಾಮರಾಜನಗರ ದಲ್ಲಿ ಸಂಪೂರ್ಣ ವಿಫಲವಾಗಿ, ಪ್ರತಿಭಟನೆಗಷ್ಟೇ ಸೀಮಿತವಾಯಿತು. ಜನಜೀವನ ಸಹಜಸ್ಥಿತಿಯಲ್ಲಿದೆ. ನಗರದ ಭುವನೇಶ್ವರಿ ವೃತ್ತದಲ್ಲಿ ಕನ್ನಡ ಸಂಘಟನೆಗಳ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆಯ ಕಾವು ಹೆಚ್ಚಿಸಲು ಪ್ರಯತ್ನಿಸಿದರು. ಆದರೆ ಕನ್ನಡಪರ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಪೊಲೀಸರು ಬಂದ್ ವಿಫಲಗೊಳಿಸಿದ್ದಾರೆ. ಆಟೋ, ಕ್ಯಾಬ್, ಇನ್ನಿತರ ವಾಹನ ಸಂಚಾರ ಮಾಮೂಲಿನಂತಿದೆ. ಜನ ಸಂಚಾರಕ್ಕೂ ಯಾವುದೇ ರೀತಿಯ ತೊಂದರೆಯುಂಟಾ ಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ನಗರದ […]