ಲಾಹೋರ್: ಪಂಜಾಬ್ ಪ್ರಾಂತ್ಯದಲ್ಲಿನ ಹಿಂದೂ ದೇವಸ್ಥಾನದ ಮೇಲೆ ನಡೆದ ದಾಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ 50ಕ್ಕೂ ಹೆಚ್ಚು ಜನರನ್ನು ಶನಿವಾರ ಬಂಧಿಸಿದೆ. 150ಕ್ಕೂ ಹೆಚ್ಚು ಜನರ ವಿರುದ್ಧ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ಟ್ವೀಟ್ ಮಾಡಿದ್ದಾರೆ. ರಹೀಮ್ ಯಾರ್ ಖಾನ್ ಜಿಲ್ಲೆಯ ಭೋಂಗ್ ಪಟ್ಟಣದಲ್ಲಿ ಬುಧವಾರ ಈ ಘಟನೆ ನಡೆದಿತ್ತು. ಸ್ಥಳೀಯ ಧಾರ್ಮಿಕ ಶಾಲೆಯೊಂದರಲ್ಲಿ 8 ವರ್ಷದ ಹಿಂದೂ ಬಾಲಕ ನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ ಎಂದು ಆರೋಪಿಸಲಾಗಿತ್ತು. ಬಾಲಕನನ್ನು […]