ಬೆಂಗಳೂರು: ವಕ್ಫ್ ಮಂಡಳಿ (Waqf board) ಆಸ್ತಿ ಎಂದು ಪಹಣಿಯಲ್ಲಿ ದಾಖಲಾದ ಬಳಿಕ ರೈತರೊಬ್ಬರು ಆತ್ಮಹತ್ಯೆ (Self harming) ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ (Karnataka high court) ರದ್ದುಗೊಳಿಸಿದೆ. ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ತೇಜಸ್ವಿ ಸೂರ್ಯ ಅವರು ಅರ್ಜಿ ಸಲ್ಲಿಸಿದ್ದು, ಆರೋಪಗಳಿಗೆ ಆಧಾರವಿಲ್ಲ ಮತ್ತು ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ. […]