Thursday, 15th May 2025

ಪತ್ರಕರ್ತರ ಬೆದರಿಕೆ ಪ್ರಕರಣ: ಜ-ಕಾಶ್ಮೀರ ಪೊಲೀಸರಿಂದ ಶೋಧ

ಶ್ರೀನಗರ: ಪತ್ರಕರ್ತರ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ತನಿಖಾ ಸಂಸ್ಥೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯ ಭಾಗವಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ಕೇಂದ್ರಾಡಳಿತ ಪ್ರದೇಶದ ಮೂರು ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದರು. ಕೆಲವು ದಿನಗಳ ಹಿಂದೆ ನಡೆಸಿದ ಹುಡುಕಾಟಗಳಿಂದ ದೊರೆತ ಸುಳಿವುಗಳ ಆಧಾರದ ಮೇಲೆ ಶ್ರೀನಗರ, ಬದ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಶ್ರೀನಗರ ಪೊಲೀಸರು ಟ್ವೀಟ್‌ ಮಾಡಿದ್ದಾರೆ. ನ.19 ರಂದು, ನಿಷೇಧಿತ ಭಯೋತ್ಪಾದಕ ಸಂಘಟನೆಯಿಂದ ಕಾಶ್ಮೀರ ಮೂಲದ ಪತ್ರಕರ್ತರಿಗೆ ಬೆದರಿಕೆಯ ಹಿನ್ನೆಲೆಯಲ್ಲಿ, […]

ಮುಂದೆ ಓದಿ